ಧೊಂಡಿಯ ವಾಘ

ಜನನ: ಧೊಂಡಿಯ, ಚನ್ನಗಿರಿ,  ದಾವಣಗೆರೆ ಜಿಲ್ಲೆ

ಮರಣ: ೧೦ನೇ ಸೆಪ್ಟಂಬರ್ ೧೮೦೦, ಕೊತ್ನೆಕಲ್ಲು/ಕೊತ್ತನಕಲ್ಲು/ಕೊನೆಗಲ್ಲು, ಮಾನ್ವಿ ತಾಲೂಕು, ರಾಯಚೂರು ಜಿಲ್ಲೆ

ಇತರೆ ಹೆಸರುಗಳು: ಧೊಂಡಿಯ ವಾಘ್, ಧೊಂಡಿಯ, ಧೊಂಡಿಜಿ ವಾಘ್, ಧುಂಡಿಯಾ, ಧುಂಡಿಯಾ ವಾಘ್, ಧೊಂಡಿ, ಮಲಿಕ್ ಜಹಾನ್ ಖಾನ್

 

೧೮ನೆಯ ಶತಮಾನದ ಅಂತ್ಯದ ವೇಳೆ ಆಗಿನ ಮೈಸೂರು ಪ್ರಾಂತ್ಯ ಮತ್ತು ಸುತ್ತಮುತ್ತ ಒಬ್ಬ ಸೈನಿಕನಾಗಿಅಶ್ವದಳದ ನಾಯಕನಾಗಿಕೆಲವು ಪ್ರದೇಶಗಳ ಒಡೆಯನಾಗಿಬ್ರಿಟೀಶರ ವಿರುದ್ಧ ಮೈಸೂರು ಪ್ರಾಂತ್ಯದಲ್ಲಿ ಹೋರಾಟ ಮಾಡಿದ ಒಬ್ಬ ಸಾಹಸಿ ಧೊಂಡಿಯ ವಾಘಕೆಳದಿಯ ಸಂಸ್ಥಾನದಲ್ಲಿ ಕರಣಿಕರಿಗೆ ಸಹಾಯಕನಾಗಿ ವೃತ್ತಿ ಆರಂಭಿಸಿದನಂತರ ಮೈಸೂರಿನ ಹೈದರಾಲಿ ಸೈನ್ಯದಲ್ಲಿ ಸೈನಿಕನಾಗಿ ಸೇರಿದಮೂರನೇ ಮೈಸೂರು ಯುದ್ಧದ ನಂತರ ಟಿಪ್ಪುವಿನ  ಸೈನ್ಯವನ್ನು ತೊರೆದು ್ವತಂತ್ರವಾಗಿ ಸೈನ್ಯ ಕಟ್ಟಿ ಹರಿಹರ (ಊರು), ಸವಣೂರು ಮುಂತಾದ ಊರುಗಳನ್ನು ಗೆದ್ದು ತನ್ನ ಪ್ರಭಾವವನ್ನು ವಿಸ್ತರಿಸಲು ಪ್ರಯತ್ನಿಸಿದಮರಾಠಾರೊಂದಿಗೆ ಸೋತ ಕಾರಣ ಮತ್ತೆ ಟಿಪ್ಪುವನ್ನು ಆಶ್ರಯಿಸಲು ನಿಶ್ಚಯಿಸಿದಆಗ ಅವನಿಗೆ ಮತಾಂತರ ಹೊಂದಲು ಒತ್ತಾಯಿಸಿ ಮಲಿಕ್ ಜಹಾನ್ ಖಾನ್ ಎಂದು ಹೆಸರಿಸಿಟ್ಟರುಆದರೆ ಮತಾಂತರ ಹೊಂದದ ಕಾರಣದಿಂದ ಟಿಪ್ಪು ಈತನನ್ನು  ವರ್ಷಗಳ ಕಾಲ ಬಂಧನದಲ್ಲಿ ಇರಿಸಿದನಾಲ್ಕನೆಯ ಮೈಸೂರು ಯುದ್ಧದಲ್ಲಿ ಟಿಪ್ಪು ಸೋತ ನಂತರ ಧೊಂಡಿಯ ಶ್ರೀರಂಗಪಟ್ಟಣದಿಂದ ತಪ್ಪಿಸಿಕೊಂಡು ಮತ್ತೆ ತನ್ನ ಪ್ರಭುತ್ವವನ್ನು ಸ್ಥಾಪಿಸಲು ಪ್ರಯತ್ನಿಸಿ ಉಭಯಲೋಕಾಧೀಶ್ವರ ಎನ್ನಿಸಿಕೊಂಡಕಡೆಯಲ್ಲಿ ಬ್ರಿಟೀಷರೊಡನೆ ಹೋರಾಡುತ್ತಾ ೧೮೦೦ರಲ್ಲಿ ಮರಣ ಹೊಂದಿದ.

 

ಪ್ರಾರಂಭದ ದಿನಗಳು:-

ಧೊಂಡಿಯ ಚೆನ್ನಗಿರಿಯಲ್ಲಿ ೧೮ನೇ ಶತಮಾನದ ಉತ್ತರಾರ್ಧದಲ್ಲಿ ಹುಟ್ಟಿದಮರಾಠರ ಒಂದು ಸಾಮಾನ್ಯ ಪವಾರ್‌ ಪರಿವಾರದಲ್ಲಿ ಇವನ ಜನನವಾಯಿತು ಕಾಲಖಂಡದಲ್ಲಿ ಚೆನ್ನಗಿರಿಯು ಕೆಳದಿಯ ಸಂಸ್ಥಾನದ ಆಳ್ವಿಕೆಗೊಳಪಟ್ಟಿತ್ತುಧೊಂಡಿಯ ಕೆಳದಿಯ ಚೆನ್ನಮ್ಮನ ಕಥೆಗಳನ್ನು ಕೇಳುತ್ತಾ ಬೆಳೆದನುಗುರು ಸಿದ್ದಪ್ಪ ಶೆಟ್ಟರ ಗರಡಿಯಲ್ಲಿ ಅಶ್ವಾರೋಹಣಕತ್ತಿ ವರಸೆಮಲ್ಲಯುದ್ಧಗಳ ಅಭ್ಯಾಸವನ್ನು ಮಾಡಿ ಇಡೀ ಚೆನ್ನಗಿರಿ ಸೀಮೆಗೆ ಉದಯೋನ್ಮುಖ ಯೋಧನೆನಿಸಿಕೊಂಡಿದ್ದ ಸಮಯದಲ್ಲಿ ಕೆಳದಿಯ ರಾಜಮನೆತನದಲ್ಲಿ ಅಂತಃಕಲಹಗಳು ಏರ್ಪಟ್ಟಿತ್ತುಇವೆಲ್ಲದರ ನಡುವೆ ಎತ್ತರದ ನಿಲುವಿನಶಕ್ತಿಶಾಲಿಯುವ ಪ್ರಭಾವಿ ವ್ಯಕ್ತಿತ್ವದ ಧೊಂಡಿಯನಿಗೆ ಕೆಳದಿಯ ಸಂಸ್ಥಾನದ ಸೈನ್ಯ ಸೇರಲು ಊರಿನ ಜನ ಹುರಿದುಂಬಿಸಿದರು.

ಧೊಂಡಿಯ ಕೆಳದಿಯ ಸಂಸ್ಥಾನದ ಭಾಗವಾಗಿದ್ದ ಶಿಕಾರಿಪುರದಲ್ಲಿ ಒಬ್ಬ ಕರಣಿಕರಿಗೆ ಸಹಾಯಕನಾಗಿ ವೃತ್ತಿ ಆರಂಭಿಸಿದ ನಡುವೆ ಹೈದರಾಲಿ ಚಿತ್ರದುರ್ಗದ ರಾಜನಾದ ವೀರ ಮದಕರಿ ನಾಯಕರನ್ನು ಸೋಲಿಸಿದನುನಂತರ ಅವನ ದೃಷ್ಟಿ ಕೆಳದಿಯ ಮೇಲೆ ಬಿತ್ತುಅವನು ಆ ಸಂಸ್ಥಾನದಲ್ಲಿ ನಡೆಯುತ್ತಿದ್ದ ಒಳ ರಾಜಕೀಯ ಮೇಲಾಟಗಳ ಪ್ರಯೋಜನ ಪಡೆಯಲು ಹವಣಿಸುತ್ತಿದ್ದ ವಿಚಾರವು ಸಂಸ್ಥಾನದಲ್ಲೆಲ್ಲಾ ಹರಡಿ ಜನ ಮುಂದಿನ ಪರಿಸ್ಥಿತಿಯ ಬಗ್ಗೆ ಚಿಂತಿತರಾಗಿದ್ದರುಕೆಲ ಸಮಯದ ನಂತರ ಹೈದರಾಲಿ ಕೆಳದಿ ಸಂಸ್ಥಾನದ ರಾಜಧಾನಿಯಾದ ಬಿದನೂರಿನ ಮೇಲೆ ದಾಳಿ ಮಾಡಿದರಾಣಿ ವೀರಮ್ಮಾಜಿ ವೀರಾವೇಶದಿಂದ ಹೋರಾಡಿದಳುಆದರೆ ಅಲ್ಲಿ ನಡೆದ ಒಳಸಂಚಿನ ಕಾರಣ ಆಕೆ ಸೋತಳು.

ಧೊಂಡಿಯ ಹೈದರಾಲಿಯ ಸೈನ್ಯವನ್ನು ಸೇರಿದಅಲ್ಲಿ ವಿಷ್ಣುಪಂಡಿತ ಎಂಬ ಅಶ್ವಪಡೆಯ ದಳಪತಿ ಕೈಕೆಳಗೆ ಕೆಲಸ ಪ್ರಾರಂಭಿಸಿದತನ್ನ ಸತತ ಪರಿಶ್ರಮದ ಕಾರಣದಿಂದ ಕೆಲವೇ ಸಮಯದಲ್ಲಿ ಅವನು ಅಶ್ವದಳದ ನಾಯಕ ಶಿಲ್ಲೆದಾರ್ ಪದವಿಗೆ ಏರಿದ.

 

ಮೂರನೆಯ ಮೈಸೂರು ಯುದ್ಧ ಮತ್ತು ತದನಂತರ:- 

ಮೂರನೇ ಮೈಸೂರು ಯುದ್ಧದಲ್ಲಿ (೧೭೯೨ಟಿಪ್ಪು ತಲ್ಲೀನನಾಗಿದ್ದ ಸಮಯವನ್ನು ಉಪಯೋಗಿಸಿ ಧೊಂಡಿಯ ಟಿಪ್ಪುವಿನ ಸೈನ್ಯ ತೊರೆದು ಹೋಗಲು ನಿಶ್ಚಯಿಸಿಯೋಜನೆ ಮಾಡಿ ಸಫಲನಾದತನ್ನೊಂದಿಗೆ ಇನ್ನು ಕೆಲವು ಸಹಚರರನ್ನು ಸೇರಿಸಿಕೊಂಡು ಈಗಿನ ಗದಗದಲ್ಲಿರುವ ಲಕ್ಷ್ಮೇಶ್ವರದ ದೇಸಾಯಿಯನ್ನು (ಕಂದಾಯ ವಸೂಲಿ ಮಾಡುವ ಹಕ್ಕಿರುವ ಅಧಿಕಾರಿಟಿಪ್ಪುವಿಗೆ ಕಪ್ಪ ಕಾಣಿಕೆ ಕೊಡುವ ಬದಲು ತನಗೆ ಕೊಡಬೇಕು ಎಂದು ಒತ್ತಾಯಿಸಿದನುತಾನು ಅವನ ರಕ್ಷಣೆಗೆ ಇರುವುದಾಗಿ ಒಪ್ಪಿಸಿದಬ್ರಿಟೀಶರೊಂದಿಗೆ ಯುದ್ಧದಲ್ಲಿ (೧೭೯೨ಟಿಪ್ಪುವಿನ ಸೋಲಾಯಿತುಟಿಪ್ಪುವಿಗೆ ಆಂಗ್ಲರ ಬಳಿ ತನ್ನ ಇಬ್ಬರು ಮಕ್ಕಳನ್ನು ಒತ್ತೆಯಾಗಿ ಇಡುವ ಪರಿಸ್ಥಿತಿ ಬಂದಿತುಧೊಂಡಿಯ ಟಿಪ್ಪುವಿನ ದೌರ್ಬಲ್ಯದ ಲಾಭ ಪಡೆದು ಮೈಸೂರು ಮತ್ತು ಮರಾಠರ ಗಡಿ ಭಾಗದಲ್ಲಿ ಒಂದೊಂದಾಗಿ ಪ್ರದೇಶಗಳನ್ನು ಗೆಲ್ಲುತ್ತಾ ಹೋದಧಾರವಾಡ ಸೀಮೆಯ ಪ್ರದೇಶದಲ್ಲಿ ಕಪ್ಪ ಕಾಣಿಕೆ ಪಡೆಯುತ್ತಾ ಹೋದ೧೭೯೩ ಜನವರಿಯಲ್ಲಿ ಹಾವೇರಿ ಮತ್ತು ಸವಣೂರನ್ನು ಗೆದ್ದು ತನ್ನ ರಾಜ್ಯವನ್ನು ವಿಸ್ತರಿಸಿದಶ್ರೀರಂಗಪಟ್ಟಣದ ಒಪ್ಪಂದದ ಪ್ರಕಾರ ಟಿಪ್ಪು ಮರಾಠರಿಗೆ ಬಿಟ್ಟುಕೊಟ್ಟ ಊರುಗಳನ್ನು ಗೆಲ್ಲುತ್ತಾ ಹೋದಇದರ ಪ್ರಭಾವ ಶಿವಮೊಗ್ಗಬಿದನೂರುಶಿಕಾರಿಪುರ ಮುಂತಾದ ಪ್ರದೇಶಗಳ ಮೇಲೂ ಆಯಿತು.

ಧೊಂಡಿಯನ ಬೆಳೆಯುತ್ತಿರುವ ಪ್ರಭಾವದಿಂದ ಮರಾಠರು ಚಿಂತಾಕ್ರಾಂತರಾದರುಅವನ ಪ್ರಭಾವವನ್ನು ಮೊಳಕೆಯಲ್ಲಿ ಚಿವುಟಿ ಮತ್ತು ಅವನನ್ನು ಮರಾಠರ ಸೀಮೆಯಿಂದ ಹೊರದೂಡಲುಮರಾಠರ ದಂಡನಾಯಕ ಪರಶುರಾಮ ಭಾವು ೧೭೯೪ರಲ್ಲಿ ಮರಾಠಾ ಸೈನ್ಯವನ್ನು ದೊಂಡೋಪಂತ್ ಗೋಖಲೆ ನೇತೃತ್ವದಲ್ಲಿ ಕಳಿಸಿದದೊಂಡೋಪಂತ್ ಗೋಖಲೆ ತನ್ನ ಸೈನ್ಯದೊಂದಿಗೆ ಸವಣೂರಿನ ಕೋಟೆಗೆ ಮುತ್ತಿಗೆ ಹಾಕಿದಧೊಂಡಿಯ ಅವನೊಡನೆ ಸ್ನೇಹ ಬಯಸಿದಆದರೆ ದೊಂಡೋಪಂತ್ ಒಪ್ಪಲಿಲ್ಲಹಲವು ದಿನಗಳ ಕದನದ ನಂತರ ಧೊಂಡಿಯ ಅಲ್ಲಿಂದ ಕದಲಬೇಕಾಯಿತುಧೊಂಡಿಯ ಆಗ ಎಂದಾದರೊಂದು ದಿನ ದೊಂಡೋಪಂತ್ ಗೋಖಲೆಯನ್ನು ಕೊಂದು ಅವನ ರಕ್ತದಲ್ಲಿ ತನ್ನ ಮೀಸೆಯನ್ನು ತೋಯ್ದುಕೊಳ್ಳುವೆನೆಂದು ಶಪಥ ಮಾಡಿದ.

ಧೊಂಡಿಯ ಅಲ್ಲಿಂದ ಸೀದಾ ಟಿಪ್ಪುವಿನ ಸಹಾಯ ಕೇಳಲು ಶ್ರೀರಂಗಪಟ್ಟಣಕ್ಕೆ ತೆರಳಿದಟಿಪ್ಪುವಿನ ಸಹಾಯ ಪಡೆಯಲು ಪ್ರಯತ್ನಿಸಿದಆದರೆ ಇದು ಕೈಗೂಡದೆ ಟಿಪ್ಪುವಿನ ಸೈನ್ಯವನ್ನು ಮತ್ತೆ ಸೇರುವ ಪ್ರಸ್ತಾಪ ಬಂದಿತುಟಿಪ್ಪು ಅವನಿಗೆ ಇಸ್ಲಾಮಿಗೆ ಮತಾಂತರ ಹೊಂದಲು ಆಮಿಷ ಒಡ್ಡಿದಆದರೆ ಟಿಪ್ಪುವಿನೊಡನೆ ವೈಮನಸ್ಯದ ಕಾರಣ ಅವನನ್ನು ಬಂದೀಖಾನೆಗೆ ಹಾಕಲಾಯಿತು;. ಅವನು ಸೆರೆಮನೆಯಲ್ಲಿಯೇ ಸುಮಾರು  ವರ್ಷಗಳ ಕಾಲ ಅಂದರೆ ಬ್ರಿಟೀಶರ ವಿರುದ್ಧ ೧೭೯೯ರಲ್ಲಿ ನಾಲ್ಕನೆಯ ಮೈಸೂರು ಯುದ್ಧ ಟಿಪ್ಪು ಸೋಲುವವರೆಗೂ ಶಿಕ್ಷೆ ಅನುಭವಿಸುತ್ತಿದ್ದ.

 

ನಾಲ್ಕನೆಯ ಮೈಸೂರು ಯುದ್ಧದ ನಂತರ:- 

ನಾಲ್ಕನೆಯ ಮೈಸೂರು ಯುದ್ಧದಲ್ಲಿ (೧೭೯೯ಟಿಪ್ಪು ಬ್ರಿಟೀಶರ ವಿರುದ್ಧ ಸೋಲುವುದರ ಜೊತೆಗೆ ಟಿಪ್ಪುವಿನ ಸಾವಾಯಿತು ಜೊತೆಗೆ ಅವನ ಸೈನ್ಯ ಛಿದ್ರಛಿದ್ರವಾಯಿತುಧೊಂಡಿಯ ಅಲ್ಲಿಯವರೆಗೂ ಶ್ರೀರಂಗಪಟ್ಟಣದಲ್ಲಿ ಐದು ವರ್ಷಗಳಿಂದ ಬಂಧನದಲ್ಲಿದ್ದರೂ ತಪ್ಪಿಸಿಕೊಳ್ಳಲು ಸಮಯ ಕಾಯುತ್ತಿದ್ದತನ್ನ ಮತ್ತು ತನ್ನ ಸಹಚರರ ಮನೋಬಲವನ್ನು ಯಾವಾಗಲೂ ಮೇಲ್ಮಟ್ಟದಲ್ಲಿರುವ ಹಾಗೆ ನೋಡಿಕೊಳ್ಳುತ್ತಿದ್ದಟಿಪ್ಪುವಿನ ಸಾವಿನಿಂದ ಸಿಕ್ಕ ಅವಕಾಶ ಉಪಯೋಗಿಸಿ ಹಲವು ಸಹಚರರೊಡನೆ ತಪ್ಪಿಸಿಕೊಂಡು ಹೋದನು.

 

ಉಭಯಲೋಕಾಧೀಶ್ವರ:- 

ಚೆನ್ನಗಿರಿಗೆ ಹಿಂದಿರುಗಿ ಸೈನಿಕರನ್ನು ಒಟ್ಟುಗೂಡಿಸಿ ಹುರಿದುಂಬಿಸಿ ಒಂದೊಂದಾಗಿ ಕೋಟೆಗಳನ್ನು ಗೆಲ್ಲಲು ಪ್ರಾರಂಭಿಸಿದಶಿವಮೊಗ್ಗಬಿದನೂರುಶಿಕಾರಿಪುರತರೀಕೆರೆಚಿತ್ರದುರ್ಗಹರಪನಹಳ್ಳಿರಾಣೇಬೆನ್ನೂರುಸವಣೂರು ಮುಂತಾದ ಕೋಟೆಗಳೆಲ್ಲಾ ಅವನ ವಶವಾದವುಬ್ರಿಟೀಶರು ಇವನನ್ನು ಮಟ್ಟ ಹಾಕಲು ಶಿಕಾರಿಪುರದ ಕೋಟೆಗೆ ಮುತ್ತಿಗೆ ಹಾಕಿದರುಅಲ್ಲಿಂದ ತಪ್ಪಿಸಿಕೊಂಡ ಧೊಂಡಿಯನನ್ನು ಸ್ಟೀವನ್ಸಂನ್ ಮತ್ತು ಡಾಲ್ರಿಂಪಲ್ ಹಿಂಬಾಲಿಸಿ ಹಿಡಿಯಲು ಹೋದಾಗ ಅವನು ನದಿಗೆ ಹಾರಿ ತಪ್ಪಿಸಿಕೊಂಡನಂತರ ಶಿಕಾರಿಪುರದ ಕಾಡಿನಲ್ಲಿ ತಪ್ಪಿಸಿಕೊಂಡಅಲ್ಲಿಯ ಬಂಜಾರರು ಅವನ ಶೂಶ್ರೂಷೆ ಮಾಡಿದರುತನ್ನನ್ನು ಉಳಿಸಿದ್ದು ಶಿಕಾರಿಪುರದ ಆರಾಧ್ಯದೈವವಾದ ಹುಚ್ಚುರಾಯ ಸ್ವಾಮಿ ಎಂದು ಅಲ್ಲಿಗೆ ಹೋಗಿ ದರ್ಶನ ಪಡೆದು ತನ್ನ ಕತ್ತಿಯನ್ನು ಸ್ವಾಮಿಗೆ ಅರ್ಪಿಸಿದ

 

 ಮಧ್ಯೆ ಅವನು ತನ್ನನ್ನು ಉಭಯಲೋಕಾಧೀಶ್ವರನೆಂದು ಘೋಷಿಸಿಕೊಂಡಒಂದು ಸಮಯದಲ್ಲಿ ಅವನ ಸೈನ್ಯದಲ್ಲಿ ೮೦,೦೦೦ ಕಾಲಾಳುಗಳು ಮತ್ತು 5,೦೦೦ ಅಶ್ವಾರೋಹಿಗಳಿದ್ದರುಕೆಲವೇ ಸಮಯದಲ್ಲಿ ಅವನು ಬೇರೆ ಬೇರೆ ಪಾಳೆಯಗಾರರನ್ನು ತನ್ನೊಂದಿಗೆ ಸೇರಿಸಿಕೊಂಡಿದ್ದಅವನಿಂದ ಸ್ಪೂರ್ತಿ ಪಡೆದ ದಕ್ಷಿಣ ಭಾರತದ ಹಲವು ಸಣ್ಣ ಪಾಳೆಯಗಾರರು ಅವನ ರೀತಿಯಲ್ಲೆ ಬ್ರಿಟೀಶರ ವಿರುದ್ಧ ಹೋರಾಡಲು ಶುರು ಮಾಡಿದರು.

 

ವೆಲ್ಲೆಸ್ಲಿಯ ದಂಡಯಾತ್ರೆ:- 

ಧೊಂಡಿಯನ ಶಕ್ತಿಯಿಂದ ಬ್ರಿಟೀಷ್ ಪ್ರಭುತ್ವ ಚಿಂತಿತವಾಯಿತುಹೀಗೇ ಬಿಟ್ಟರೆ ಮುಂದೆ ಅವನ ಪ್ರಭಾವದಿಂದ ಇತರ ಪಾಳೆಯಗಾರರುಸಣ್ಣ ತುಂಡರಸರು ಅವನನ್ನು ಅನುಕರಿಸಬಹುದು ಮತ್ತು ಇದರಿಂದ ಮೈಸೂರು ಸಂಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿನ ಶಾಂತಿ ಕದಡಬಹುದು ಎಂಬ ಅಂಜಿಕೆ ಅವರಿಗುಂಟಾಯಿತು ವಿಚಾರವನ್ನು ವಿಷದವಾಗಿ ಆಗ ತಾನೆ ಮೈಸೂರಿನ ಬ್ರಿಟಿಷ್ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದ್ದ ಅರ್ಥರ್ ವೆಲ್ಲೆಸ್ಲಿ ತನ್ನ ಗವರ್ನರ್ ಜೆನರಲ್‍ ಮಾರ್ಕಸ್ ವೆಲ್ಲೆಸ್ಲಿಗೆ ಮೇ ೨೬೧೮೦೦ ರಂದು ತಿಳಿಸಿದ.

 

ದೊಂಡೋಪಂತ್‍ ಗೋಖಲೆಯ ಅಂತ್ಯ:- 

ಜೂನ್ ೧೮೦೦ರಲ್ಲಿ ಅರ್ಥರ್ ವೆಲ್ಲೆಸ್ಲಿ ತನ್ನ  ಅಶ್ವಾರೋಹಿ ದಳಗಳು ಮತ್ತು  ಕಾಲ್ದಳಗಳ ಜೊತೆಗೆ ಚಿತ್ರದುರ್ಗದ ಸೈನಿಕರನ್ನು ಒಟ್ಟುಗೂಡಿಸಿ ಧೊಂಡಿಯನನ್ನು ಹಿಡಿಯಲು ಹೋದಇದನ್ನು ಅರಿತ ಧೊಂಡಿಯ ತನ್ನ ಸೈನ್ಯದ ಜೊತೆಗೆ ಮರಾಠಾ ಪ್ರದೇಶದಲ್ಲಿ ಹೋಗಿ ರಕ್ಷಣೆ ಪಡೆದವೆಲ್ಲೆಸ್ಲಿ ಪೇಶ್ವಾ ಎರಡನೆ ಬಾಜಿ ರಾವನ ಅನುಮತಿ ಪಡೆದು ಧೊಂಡಿಯನನ್ನು ಹಿಡಿಯಲು ಹೊರಟಜೂನ್ ೧೬ ರಂದು ಅವನು ಹರಿಹರ ತಲುಪಿದಅದೇ ವೇಳೆಯಲ್ಲಿ ಧೊಂಡಿಯ ಹುಬ್ಬಳ್ಳಿ ಸೀಮೆಯನ್ನು ಜೂನ್ ೧೯ಕ್ಕೆ ತಲುಪಿದವೆಲ್ಲೆಸ್ಲಿ  ಅವಕಾಶವನ್ನು ಉಪಯೋಗಿಸಿ ಅವನು ಗೆದ್ದಿದ್ದ ಕೋಟೆಗಳನ್ನು ಒಂದೊಂದಾಗಿ ಗೆಲ್ಲಲು ಪ್ರಾರಂಭಿಸಿದ.  ರಾಣಿಬೆನ್ನೂರು ಮತ್ತು ಬಿದನೂರು ಕೋಟೆಗಳನ್ನು ಗೆದ್ದರೂ ಧೊಂಡಿಯ ಅಲ್ಲಿಂದ ತಪ್ಪಿಸಿಕೊಂಡಿದ್ದ.

ಪೇಶ್ವೆಗೂ ಈಗ ಧೊಂಡಿಯನನ್ನು ಸೋಲಿಸುವ ಅವಶ್ಯಕತೆಯಿತ್ತು ಕಾರಣಕ್ಕೆ ಚಿಂತಾಮಣಿರಾವ್ ಪಟ್ವರ್ಧನ್‍ನ ನೇತೃತ್ವದಲ್ಲಿ ಒಂದು ದೊಡ್ಡ ಸೈನ್ಯವನ್ನು ಕಳಿಸಿದಅದರಲ್ಲಿ ಹಿಂದೆ ಧೊಂಡಿಯನನ್ನು ಸೋಲಿಸಿದ್ದ ದೊಂಡೋಪಂತ್ ಗೋಖಲೆ ಮತ್ತು ದೊಂಡೋಪಂತ್‍ನ ಸಹೋದರನ ಮಕ್ಕಳು ಅಪ್ಪಾಜಿ ಗಣೇಶ ಮತ್ತು ಬಾಪುಜಿ ಗಣೇಶ ಎಂಬಿಬ್ಬರು ಇದ್ದರುಕಿತ್ತೂರಿನ ಬಳಿ ಭೀಕರ ಕದನವೇರ್ಪಟ್ಟಿತುಧೊಂಡಿಯ ವಾಘನು ಹಿಂದೆ ದೊಂಡೋಪಂಥನ ಕೈಯಲ್ಲಿ ಆದಂತಹ ತನ್ನ ಹಳೆಯ ಸೋಲು ಮತ್ತು ಅಪಮಾನಗಳನ್ನು ಮರೆತಿರಲಿಲ್ಲತದನಂತರ ಅವನು ಕೊಟ್ಟ ಸ್ನೇಹಹಸ್ತವನ್ನು ದೊಂಡೋಪಂತ್‍ ಒಪ್ಪಿರಲಿಲ್ಲಧೊಂಡಿಯ ತನ್ನ ಸಹಚರರೊಡನೆ ಯೋಜಿಸಿಹೊಂಚುಹಾಕಿ ದೊಂಡೋಪಂತ್‍ ಗೋಖಲೆಯನ್ನು ಯುದ್ಧದಲ್ಲಿ ಕೊಂದು ಅವನ ರಕ್ತದಲ್ಲಿ ತನ್ನ ಮೀಸೆಯನ್ನು ತೋಯಿಸಿ ತಾನು  ಹಿಂದೆ ಮಾಡಿದ್ದ ಶಪಥವನ್ನು ಪೂರ್ಣಗೊಳಿಸಿದ ಯುದ್ಧದಲ್ಲಿ ಅಪ್ಪಾಜಿ ಗಣೇಶನ ಅಂತ್ಯವೂ ಆಯಿತುಚಿಂತಾಮಣಿರಾವ್ ಪಟ್ವರ್ಧನನು ಧೊಂಡಿಯನ ವಿರುದ್ಧ ವೀರಾವೇಶದಿಂದ ಹೋರಾಡಿ ಬಾಪುಜಿ ಗಣೇಶನೊಂದಿಗೆ ತಪ್ಪಿಸಿಕೊಂಡು ಹಳಿಯಾಳ ಕೋಟೆ ತಲುಪಿದಅಲ್ಲಿ ಅವನಿಗೆ ಬ್ರಿಟೀಶರಿಂದ ವೀರೋಚಿತ ಸ್ವಾಗತ ದೊರೆಯಿತುಜೊತೆಗೆ ಗೆದ್ದ ಕೋಟೆಗಳನ್ನು ವೆಲ್ಲೆಸ್ಲಿ ಅವನಿಗೆ ಪುರಸ್ಕಾರವಾಗಿ ಕೊಟ್ಟನು.

 

ಧೊಂಡಿಯನ ಅವಸಾನ:- 

ಬ್ರಿಟೀಶರು ಧೊಂಡಿಯನನ್ನು ಹಿಡಿಯುವ ಪ್ರಯತ್ನವನ್ನು ಮುಂದುವರೆಸಿದರು ಮಧ್ಯೆ ಧೊಂಡಿಯನ ಹೆಸರು ಇನ್ನೂ ಬೆಳೆಯುತ್ತಲಿತ್ತುಹಲವು ಕಡೆಗಳಲ್ಲಿ ಧೊಂಡಿಯನ ಸೈನ್ಯಕ್ಕೆ ಯುವಕರನ್ನು ಸೇರಿಸಲು ಕೆಲ ಯುವಕರು ಸ್ವಯಂಪ್ರೇರಿತರಾಗಿ ಕಾರ್ಯಮಾಡುತ್ತಿದ್ದರುಹೀಗೆ ಪ್ರೇರೇಪಿಸುವಾಗ ಸಿಕ್ಕಿ ಹಾಕಿಕೊಂಡ ಯುವಕನೊಬ್ಬನನ್ನು ಬ್ರಿಟೀಶರು ಗಲ್ಲಿಗೆ ಹಾಕಿದರುಜುಲೈ ೧೨ ರಂದು ಸವಣೂರು ಗೆದ್ದರುಧೊಂಡಿಯ ಇವರಿಂದ ತಪ್ಪಿಸಿಕೊಂಡು ಕಿತ್ತೂರುಕುಂದಗೋಳಅಣ್ಣಿಗೇರಿಕಣವಿಖಾನಾಪುರಬಾದಾಮಿಗಳೆಲ್ಲಾ ಸುತ್ತಾಡಿದಅವನ ತಲೆಯ ಮೇಲೆ ೩೦,೦೦೦ ರೂ ಬಹುಮಾನ ಘೋಷಿಸಲಾಯಿತುಬ್ರಿಟೀಶರು ಪಟ್ವರ್ಧನ್‍ನ ಜೊತೆಗೂಡಿ ದಂಬಳ ಕೋಟೆಯನ್ನು ಗೆದ್ದರು ಸಮಯದಲ್ಲಿ ಧೊಂಡಿಯನನ್ನು ಅವನ ಹಲವಾರು ಸಿಪಾಯಿಗಳು ತ್ಯಜಿಸಿದರುಧೊಂಡಿಯ ಕೋಲ್ಹಾಪುರ ರಾಜನಾದ ಮೂರನೆಯ ಶಿವಾಜಿಯ ಸಹಾಯ ಪಡೆಯಬಹುದು ಎಂದು ವೆಲ್ಲೆಸ್ಲಿಗೆ ತಿಳಿಯಿತುಅವನು ಕೋಲ್ಹಾಪುರದ ರಾಜನಿಗೆ ಧೊಂಡಿಯನಿಗೆ ಯಾವ ಸಹಾಯ ಮಾಡಬಾರದೆಂದು ಮತ್ತು ಮಾಡಿದರೆ ಬ್ರಿಟೀಷ್ಮರಾಠ ಮತ್ತು ನಿಜಾಮನ ಸೈನ್ಯ ಅವನ ಮೇಲೆ ತಿರುಗುವುದೆಂದು ವಕೀಲರ ಮೂಲಕ ಹೇಳಿಕಳಿಸಿದನು.

ಆಗ ಧೊಂಡಿಯ ಮಲಪ್ರಭಾ ನದಿ ದಾಟಿನಿಜಾಮನ ರಾಜ್ಯಕ್ಕೆ ಹೋಗಲು ಯತ್ನಿಸಿದಆದರೆ ವೆಲ್ಲೆಸ್ಲಿಸ್ಟೀವನ್ಸಂನ್ಪಟ್ವರ್ಧನ್‍ ಮತ್ತು ನಿಜಾಮನ ಸೈನ್ಯಗಳು ಎಲ್ಲಾ ಕಡೆಗಳಿಂದ ಅವನನ್ನು ಸುತ್ತುವರೆದಿದ್ದವುಭೀಕರ ಕದನದಲ್ಲಿ ಧೊಂಡಿಯನ ,೦೦೦ದಷ್ಡು ಸಂಖ್ಯೆಯ ಅಶ್ವದಳ ನಾಶವಾಯಿತು೧೦ನೇ ಸೆಪ್ಟೆಂಬರ್ ಕೊಣಗಲ್‍ನಲ್ಲಿ (ಈಗಿನ ರಾಯಚೂರು ಜಿಲ್ಲೆಯಲ್ಲಿದೆನಡೆದ  ಕದನದಲ್ಲಿ ವೀರೋಚಿತ ಹೋರಾಟ ನೀಡಿದ ಧೊಂಡಿಯಬ್ರಿಟೀಶರ ವಿರುದ್ಧ ಕಡೆಯವರೆಗೂ ಹೋರಾಡುತ್ತಲೆ ಮಡಿದ.

ವೆಲ್ಲೆಸ್ಲಿ ತನ್ನ ಕಂಪನಿಯ ಹಲವರಿಗೆ ಕಳಿಸಿದ ಪತ್ರಗಳಲ್ಲಿ ಹಲವು ಬಾರಿ ಧೊಂಡಿಯನ ಬಗ್ಗೆ ಪ್ರಸ್ತಾಪಿಸಿದ್ದಾನೆಧೊಂಡಿಯನಿಗೆ ಕಡೆಯಲ್ಲಿ ಕೂಡ ಕೆಲವರಿಂದ ಸಹಾಯ ದೊರೆತ ಬಗ್ಗೆ ಯೋಗ್ಯವಾಗಿ ಪ್ರಸ್ತಾಪಿಸುತ್ತಾನೆಸರ್ ಥಾಮಸ್ ಮನ್ರೋರ ಪ್ರಕಾರ ವೆಲ್ಲೆಸ್ಲಿ ಧೊಂಡಿಯನನ್ನು ಮಣಿಸದೇ ಇದ್ದಿದ್ದರೆಅವನು ಒಬ್ಬ ಸ್ವತಂತ್ರ ರಾಜನಾಗಿಒಂದು ಹೊಸ ನಿರಂಕುಶ ರಾಜವಂಶಕ್ಕೆ ನಾಂದಿ ಹಾಡುತ್ತಿದ್ದಪಟ್ವರ್ಧನ್‍ನ ಸಹಾಯ ದೊರೆಯದೇ ಇದ್ದಿದ್ದರೆ ದೋಂಡಿಯನನ್ನು ಇಷ್ಟು ಬೇಗ ಗೆಲ್ಲಲೂ ಆಗುತ್ತಿರಲಿಲ್ಲ ಎಂದು ವೆಲ್ಲೆಸ್ಲಿ ಕೂಡ ಒಪ್ಪಿದ್ದಾನೆ.

ಯಾಪಲಪರ್ವಿ ಗ್ರಾಮದಲ್ಲಿ ಧೊಂಡಿಯನ ಸಮಾಧಿಯಿದೆ.


ದೋಂಡಿಯಾನ ಸ್ಮರಣೆ: ಇಂದಿಗೂ ಕೂಡ ಶಿಕಾರಿಪುರದ ವಿಜಯದಶಮಿಯ ದಿನ ಊರಿನ ಆರಾಧ್ಯ ದೈವ ಹುಚ್ಚುರಾಯ ಸ್ವಾಮಿಯನ್ನು ಒಳಗೊಂಡು ಹಲವು ಉತ್ಸವ ಮೂರ್ತಿಗಳ ಮೆರವಣಿಗೆ ನಡೆಯುತ್ತದೆ ದಿನ ತಾಲೂಕಿನ ತಹಸೀಲ್ದಾರರು ಹುಚ್ಚುರಾಯ ಸ್ವಾಮಿಗೆ ಧೊಂಡಿಯ ಅರ್ಪಿಸಿದ್ದ ಕತ್ತಿಯಲ್ಲಿ ದುಷ್ಟ ಸಂಹಾರದ ಸಂಕೇತವಾಗಿ ಬಾಳೆಯ ಕಂದನ್ನು ಕಡಿಯುತ್ತಾರೆ.

 

*****

Comments

Popular posts from this blog

ಸಿಂಧೂ ನಾಗರೀಕತೆಯ ಪ್ರಮುಖ ಲಕ್ಷಣಗಳು The Salient Features of the Indus Valley Civilization

ಕರ್ನಾಟಕದ ಇತಿಹಾಸ ರಚನೆಯ ಮೂಲಾಧಾರಗಳು ಭಾಗ ೧

ಸಾಹಿತ್ಯಾಧಾರಗಳು - Literary Sources